ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೈನ್ ಶಾಪ್,ಬಾರ್ ಗಳ ಮೂಲಕ ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ

ಶಹಾಪುರ:ತಾಲೂಕಿನಾದ್ಯಂತ ವೈನ್ ಶಾಪ್ ಮತ್ತು ಬಾರ್ ಗಳಿಂದ ಅಕ್ರಮವಾಗಿ ಗ್ರಾಮಗಳಿಗೆ ವಾಹನಗಳ ಮೂಲಕ ಮದ್ಯ ಮಾರಾಟ ಮಾಡುತ್ತಿದ್ದಾರೆ.
ಸರ್ಕಾರದ ಎಲ್ಲಾ ನಿಯಮಗಳನ್ನು ಮೀರಿ ವೈನ್ ಶಾಪಗಳಲ್ಲಿ ಕುಡಿಯಬಾರದೆಂಬ ನಿಯಮವಿದ್ದರೂ ಕೂಡಾ ಕುಡಿಯುವುದಕ್ಕೆ ಪಕ್ಕದಲ್ಲಿ ಎಲ್ಲಾ ಬಾರುಗಳಲ್ಲಿ ವ್ಯವಸ್ಥೆ ಮಾಡಿದ್ದಾರೆ.ಮಾರುಕಟ್ಟೆಯ ಎಂ.ಆರ್‌.ಪಿ ಬೆಲೆಗಿಂತಲೂ ಜಾಸ್ತಿ ಹಣವನ್ನು ಪಡೆಯುತ್ತಿದ್ದಾರೆ.
ಪ್ರತಿ ಹಳ್ಳಿಯಲ್ಲೂ ಕೂಡ ರಾಜಾರೋಷವಾಗಿ ಎಲ್ಲೆಂದರಲ್ಲಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ
ಮಾನ್ಯ ಅಬಕಾರಿ ನಿರೀಕ್ಷಕರು ವಿಜಯಕುಮಾರ್ ಹಿರೇಮಠ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷರಾದ ಸೋಪಣ್ಣ ಹಳಿಸಗರವರು ಮಾತನಾಡಿ ಇದೇ ವ್ಯವಸ್ಥೆ ಮುಂದುವರೆದರೆ ಶಹಾಪುರ ತಾಲೂಕಿನಲ್ಲಿ ಉಗ್ರವಾಗಿ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ್ ಡಿಚ್ಚಿ,ತಾಲೂಕು ಗೌರವಾಧ್ಯಕ್ಷರಾದ ಬಸ್ಸು ರತ್ತಾಳ, ತಾಲೂಕ ಕಾರ್ಯಾಧ್ಯಕ್ಷರಾದ ವೆಂಕಟೇಶ ನಾಯಕ, ಬಸವರಾಜ ವನದುರ್ಗ,ಗೋವಿಂದ ಆಲ್ದಾಳ,ಸಿದ್ದು ಬಾಣತಿಹಾಳ,ದೇವು ಕಾಡಮಗೆರಾ ಉಪಸ್ಥಿತರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ