ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೃಹ ಜ್ಯೋತಿ ಯೋಜನೆಯಿಂದ ಸಾರ್ವಜನಿಕರು ಖುಷ್

ಹಾವೇರಿ:ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಕೊಡುವ ತಾಕತ್ತು,ದಮ್ಮು ಕಾಂಗ್ರೆಸ್ ಸರ್ಕಾರ ಬಿಟ್ಟರೆ ಮತ್ಯಾವ ಸರ್ಕಾರಕ್ಕೂ ಇಲ್ಲ ನಿಸಾರ್ ಅಮ್ಮದ ಹೇಳಿಕೆ.
ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಜನಪರ ಗೃಹ ಜ್ಯೋತಿ ಉದ್ಘಾಟನೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗುತ್ತಿರುವ ಹಿನ್ನೆಲೆಯಲ್ಲಿ ಶಿಗ್ಗಾವ್ ವಿಧಾನಸಭಾ ಮತಕ್ಷೇತ್ರದ ಗೃಹ ಜ್ಯೋತಿ ಫಲಾನುಭವಿಗಳ ಅಭಿಪ್ರಾಯ ಹಾಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳ ಜನಸಾಮಾನ್ಯರ ಅಭಿಪ್ರಾಯ ಸಂಗ್ರಹಣೆ.
ತಾಲೂಕ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರ ಮಂಜುನಾಥ್ ಮಣ್ಣಣ್ಣವರ ನೇತೃತ್ವದಲ್ಲಿ ಜರುಗಿತು ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇದ್ದರೆ ಎಲ್ಲಾ ಜನರಿಗೂ ಯೋಜನೆ ಮಾಡಿ ಜನರಿಗೆ ತಲುಪಿಸುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ನಾಲ್ಕನೆಯ ಗ್ಯಾರಂಟಿ ಗೃಹಜ್ಯೋತಿ ಯೋಜನೆಯನ್ನು ಸರ್ಕಾರದಿಂದ ಚಾಲನೆಗೊಳಿಸಲಾಯಿತು.ಶಿಗ್ಗಾವಿಪಟ್ಟಣದ ಹಲವು ತಾಯಂದಿರ ನಾಗರೀಕರ ಅಭಿಪ್ರಾಯ ಕೇವಲ ಘೋಷಣೆ ಶೋಷಣೆಗಳ ಬಿಜೆಪಿ ಆಡಳಿತದ ಸರಕಾರದ ವೈಖರಿಯಿಂದ ಋಷಿ ಹೋಗಿದ್ದ ರಾಜ್ಯದ ಜನತೆ ಇಂದಿನ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಕಾರಾತ್ಮಕವಾಗಿಯೂ ಹಾಗೂ ಸರ್ಕಾರಕ್ಕೂ ಒಳ್ಳೆಯ ಸಂದೇಶ ನೀಡಿದ್ದಾರೆ.ಸರಕಾರದ ಯೋಜನೆಗಳಿಂದ ಬಡವರು ಹಾಗೂ ದುಡಿದು ಹೊಟ್ಟೆ ತುಂಬಿಕೊಳ್ಳುವರಿಗೆ ಸಾಕಷ್ಟು ಅನುಕೂಲವಾಗಿದೆ ಜೊತೆಗೆ ಈ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸುವ ಹಾಗೂ ಅಭಿಪ್ರಾಯ ಸಂಗ್ರಹ ಮಾಡುವ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರಿಂದ ಆಗಬೇಕು ಅಂದಾಗ ಕಾಂಗ್ರೆಸ್ಸಿನ ಈ ಕಾರ್ಯಕ್ರಮಗಳೇ ಇಂದು ಹಾಗೂ ಮುಂದಿನ ದಿನಮಾನಗಳಲ್ಲಿ ಪಕ್ಷಕ್ಕೂ ಹಾಗೂ ಜನತೆಗೆ ಅನುಕೂಲವಾಗುವುದರಲ್ಲಿ ಯಾವುದೇ ಸಂದೇಹವಿಲ್ಲವೆಂದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ನಿಸಾರ್ ಅಹ್ಮದ್ ತೂಕಲ್ಲಿ ಮಾತನಾಡಿ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಕೊಡುವ ತಾಕತ್ತು ದಮ್ಮು ಕಾಂಗ್ರೆಸ್ ಸರ್ಕಾರ ಬಿಟ್ಟರೆ ಮತ್ಯಾವ ಸರ್ಕಾರಕ್ಕೂ ಇಲ್ಲ ಎಂದು ಹೇಳಿದರು.
ಶಿಗ್ಗಾವ್ ಪಟ್ಟಣದ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಾತನಾಡಿ ನೇತೃತ್ವದ ಸರಕಾರದ ಯೋಜನೆಗಳು ಜನರ ಮನಕ್ಕೆ ಮುಟ್ಟಿದ್ದು ಮೆಚ್ಚುಗೆ ಹಾಗೂ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
ತಾಲೂಕ ಎಸ್ ಟಿ ಘಟಕದ ಅಧ್ಯಕ್ಷ ಅಶೋಕ್ ಓಲೆಕಾರ್ ಮಾತನಾಡಿ ಸರ್ಕಾರದ ಯೋಜನೆಗಳು ಎಲ್ಲರ ಮನೆಗೂ ತಲುಪುತ್ತಿದ್ದು ಜನರು ಕಾಂಗ್ರೆಸ್ ಪಕ್ಷದ ಮೇಲೆ ಹೆಚ್ಚಿನ ನಂಬಿಕೆ ವಿಶ್ವಾಸ ಹೊಂದಿದ್ದಾರೆ ಎಂದರು.
ವರದಿ-ಮಂಜುನಾಥ ಗೌಡ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ