ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ-ಮಂಜುನಾಥ ಗುಂಡೂರು

ಸಿಂಧನೂರಿನ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ(ವಾಣಿಜ್ಯ ತೆರಿಗೆಗಳ)ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್,ವಾಣಿಜ್ಯ ತೆರಿಗೆ ಇಲಾಖೆ,ನ್ಯಾಷನಲ್ ಕಾಲೇಜು ಹಾಗೂ ಸುರೇಶ ನೆಕ್ಕಂಟಿಯವರ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ನಗರ ಸಭೆ ಪೌರಾಯುಕ್ತರಾದ ಮಂಜುನಾಥ ಗುಂಡೂರು ಮಾತನಾಡಿ ಪ್ರಕೃತಿ ನಮಗೆ ನೀಡಿದ ಕೊಡುಗೆ ಅಂದರೆ ನೈಸರ್ಗಿಕ ಸಂಪನ್ಮೂಲ. ನೈಸರ್ಗಿಕ ಸಂಪನ್ಮೂಲಗಳನ್ನು ಪ್ರತಿಯೊಬ್ಬರೂ ಉಳಿಸಿ ಬೆಳಸಲು ಮುಂದಾಗಬೇಕು ನೈಸರ್ಗಿಕ ಸಂಪನ್ಮೂಲ ಇವುಗಳನ್ನು ಉಳಿಸಿ ಬೆಳಸಿದಾಗ ಮಾತ್ರ ನಾವು ಜೀವಿಸಲು ಸಾದ್ಯ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನೈಸರ್ಗಿಕ ಸಂಪನ್ಮೂಲಗಳ ಕೊರತೆಯಿಂದ ನಾವುಗಳೆಲ್ಲರೂ ಪರದಾಡಬೇಕಾಗುತ್ತದೆ. ಪ್ರತಿಯೊಬ್ಬರಿಗೂ ನೈಸರ್ಗಿಕ ಸಂಪನ್ಮೂಲಗಳಾದ ಭೂಮಿ ಮಣ್ಣು,ನೀರು,ಗಾಳಿ,ಸಸ್ಯಗಳು ಇನ್ನೂ ಮುಂತಾದವುಗಳು ಮನುಷ್ಯನಿಗೆ ಅತ್ಯವಶ್ಯಕವಾಗಿದೆ ಇವುಗಳನ್ನು ಉಳಿಸಿ ಬೆಳಸಲು ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಲವಾರು ವಿವಿಧ ಹಣ್ಣಿನ ಹಾಗೂ ಹೂವಿನ ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಅಧಿಕಾರಿಗಳಾದ SN ಪಾಟೀಲ,ನಗರಸಭೆ ಪೌರಾಯುಕ್ತರಾದ ಮಂಜುನಾಥ ಗುಂಡೂರು,ಸುರೇಶ ನೆಕ್ಕಂಟಿ ಉದ್ದಿಮೆದಾರರು,ರಾಷ್ಟ್ರೀಯ ಯೋಜನಾ ಘಟಕದ ಅಧಿಕಾರಿಗಳಾದ ರವಿಕುಮಾರ ಮಸ್ಕಿ,ಸತೀಶ,ಮಲ್ಲಿಕಾರ್ಜುನ,ಸೌಮ್ಯ,ಶಂಕರಗೌಡ,ಶಿವರಾಜ,ಆನಂದ,ದುರಗಪ್ಪ,ಸೂಗಪ್ಪ,ಖಾಜಾಪಾಷಾ,
ಶರಣಮ್ಮ,ಸಾಗರ ಹಾಗೂ ನ್ಯಾಷನಲ್ ಕಾಲೇಜು ಶಿಕ್ಷಕರು,ವಿದ್ಯಾರ್ಥಿಗಳಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ