ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ಹೆದ್ದಾರಿ 206 ಚತುಷ್ಪತ ರಸ್ತೆಯಾಗಿ ಮೇಲ್ದರ್ಜೆಗೆ ಕೇಂದ್ರದ ಒಪ್ಪಿಗೆ

ತುಮಕೂರು ಜಿಲ್ಲೆ ತಿಪಟೂರು ನಗರದ ಸಮೀಪ ಹುಚ್ಚಗೊಂಡನಹಳ್ಳಿ ಬೈಪಾಸ್ ನಿಂದ ತಿಪಟೂರಿನ ಕೋಡಿ ಸರ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿ 72.390 km ನಿಂದ 82.445 km ವರೆಗೆ ಅಂದಾಜು ಹತ್ತು ಕಿಲೋಮೀಟರ್ ದ್ವಿಪಥ ರಸ್ತೆಯನ್ನು ಚತುಷ್ಪತ ರಸ್ತೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 2006ನ್ನು ಚತುಷ್ಪತ ರಸ್ತೆಯಾಗಿ ಪರಿವರ್ತಿಸುವ ಕೆಲಸ ಈಗಾಗಲೇ ಪ್ರಗತಿಯಲ್ಲಿದ್ದು ತಾಲೂಕಿನ ಹುಚ್ಚಗೊಂಡನಹಳ್ಳಿ ಗ್ರಾಮದಿಂದ ಬೈಪಾಸ್ ಮೂಲಕ ನಗರದ ಹೊರವಲಯದಲ್ಲಿ ಬಂದು ಮಡೆನೂರು ಗೇಟಿನ ಬಳಿ ರಾಷ್ಟ್ರೀಯ ಹೆದ್ದಾರಿ 2006 ಕ್ಕೆ ಸೇರುತ್ತದೆ. ಹೀಗಾಗಿ ತಿಪಟೂರು ತಾಲೂಕಿ ಹುಚ್ಚಗೊಂಡನಹಳ್ಳಿ ಗ್ರಾಮದಿಂದ ತಿಪಟೂರು ನಗರದ ವರೆಗೆ ದ್ವಿಪಥ ರಸ್ತೆಯಾಗಿಯೇ ಉಳಿದಿತ್ತು.

ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಸ್ಥಳೀಯ ಶಾಸಕರು ಆದ ಶಿಕ್ಷಣ ಸಚಿವ ಬಿಸಿ ನಾಗೇಶ್ ಪಟ್ಟಣದ ಕೋಡಿ ಸರ್ಕಲ್ ನಿಂದ ಹುಚ್ಚಗೊಂಡನಹಳ್ಳಿ ಬೈಪಾಸ್ ವರೆಗೆ ಚತುಷ್ಪತ ಕಾಮಗಾರಿ ನಡೆಸಲಾಗುತ್ತದೆ ಇದಕ್ಕಾಗಿ ಹೆಚ್ಚುವರಿ ಭೂಸ್ವಾಧೀನದ ಅವಶ್ಯಕತೆ ಇಲ್ಲ ಎಂದರು.

ವರದಿ – ಮನು ತಿಪಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ