ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೊಬ್ಬುರ(ಬಿ.) ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನ ಆಚರಣೆ


ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಗೊಬ್ಬುರ (ಬಿ.) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ.ಎಸ್ ಆರ್ ರಂಗನಾಥನ್ ಅವರ ಜನ್ಮ ದಿನದ ನಿಮಿತ್ಯವಾಗಿ ರಾಷ್ಟ್ರೀಯ ಗ್ರಂಥಪಾಲಕರ ದಿನ ಆಚರಿಸಲಾಯಿತು ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಝಾಖಿರ್ ಹುಸೇನ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳು ಮೊಬೈಲ್,ಟಿವಿ ಇತ್ಯಾದಿ ದೃಶ್ಯ ಮಾಧ್ಯಮಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ ಇದು ಅವರ ಜೀವನ ಮತ್ತು ಭವಿಷ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುವ ಸಂಭವ ಹೆಚ್ಚು ಜೊತೆಗೆ ಇದರಿಂದ ಅವರಲ್ಲಿ ಪುಸ್ತಕ ಓದುವ ಹವ್ಯಾಸವು ಕೂಡಾ ಕಡಿಮೆ ಆಗ್ತಾ ಇದೆ ಆದ್ದರಿಂದ ಮಕ್ಕಳೂ ಈ ವಾತಾವರಣದಿಂದ ಹೊರಬಂದು ಮೊಬೈಲ್ ಗಳನ್ನು ಬಿಟ್ಟು ಪುಸ್ತಕ ಓದುವ ಗೀಳನ್ನು ರೂಢಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.ಈ ಸಂದರ್ಭದಲ್ಲಿ ಗ್ರಂಥಪಾಲಕರಾದ ವನಮಾಲಾ ಮಠಪತಿ ಅಥಿತಿಗಳಾಗಿ ಆಗಮಿಸಿದ ಶ್ರೀ ಶಿವಾನಂದ ಕೌದಿ ಶಾಲೆಯ ಶಿಕ್ಷಕರಾದ ಗುರಪ್ಪ,ಕರುಣಾಕರ್ ಕುಲಕರ್ಣಿ,ನೀಲಮ್ಮ,ಚಂದ್ರಕಲಾ,ವಿಜಯಲಕ್ಷಿ ಶಾಲಿನಿ,ಸುವರ್ಣರಾಣಿ,ಕೈಸರ್,ನಾಗಮ್ಮ ಪಂಚಾಳ ಶಿವಲೀಲಾ ಗಣಾಚಾರಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
ವರದಿ:ಮಹಾದೇವ ವಿಶ್ವಕರ್ಮ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ