ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯೋಗವು ವ್ಯಕ್ತಿಯನಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ – ಶ್ರೀ ಗುರುನಾಥ ಮೂಲಗೆ

ದಿನಾಂಕ : ೨೪-೦೮-೨೦೨೩
“ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರ ವತಿಯಿಂದ ವ್ಯಕ್ತಿತ್ವ ಹಾಗೂ ಯೋಗಾ ಕುರಿತು
ದಿನಾಂಕ : ೨೩-೦೮-೨೩ ರಿಂದ ೨೫-೦೮-೨೩ರ ವರೆಗೆ ಮೂರು ದಿನಗಳ ವಿಶೇಷ ಶಿಬಿರ ಕಾರ್ಯಕ್ರಮ”ಹಮ್ಮಿಕೊಳ್ಳಲಾಗಿತ್ತು.


ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಬೀದರನ ವತಿಯಿಂದ ವ್ಯಕ್ತಿತ್ವ ಮತ್ತು ಯೋಗಾ ಕುರಿತು ಮೂರು ದಿನಗಳ ವಿಶೇಷ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಗುರುನಾಥ ಮೂಲಗೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯೋಗವು ಇಂದಿನ ಯುಗದಲ್ಲಿ ವ್ಯಕ್ತಿಯ ಆಂತರಿಕ ಮತ್ತು ಬಾಹ್ಯ ವ್ಯಕ್ತಿತ್ವವನ್ನು ರೂಪಿಸಿ ರೋಗಮುಕ್ತನಾಗಿ ಮಾಡುವ ಸಾಧನವಾಗಿದೆ. ರೋಗಗಳ ಪರಿಹಾರಕ್ಕೆ ಎಲ್ಲಿ ವಿಜ್ಞಾನವು ನಿಲ್ಲುತ್ತದೆಯೋ ಅಲ್ಲಿಂದ ಯೋಗವು ರೋಗ ಪರಿಹಾರಕವಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಂಡು ಉತ್ತಮ ಅಂಕ ಗಳಿಸಲು ಸಹಕಾರಿಯಾಗುತ್ತದೆ. ಅಲ್ಲದೇ ಯೋಗವು ವ್ಯಕ್ತಿಯನಲ್ಲ ಆತನ ವ್ಯಕ್ತಿತ್ವವನ್ನು ರೂಪಿಸು, ಚಿತ್ರವನಲ್ಲ ಚರಿತ್ರೆಯನ್ನು ರೂಪಿಸು, ಎನ್ನುವ ಮನೋಭಾವನೆಯನ್ನು ಮೂಡಿಸುತ್ತದೆ, ಇಂದಿನ ಯುವಜನರು ಅನೇಕ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಜೊತೆಗೆ ಮಾನಸಿಕವಾಗಿ ಅಶ್ವಸ್ಥರಾಗುತ್ತಿದ್ದು, ಅವರಿಗೆಲ್ಲಾ ಯೋಗವು ಇವೆಲ್ಲವುಗಳಿಂದ ಮುಕ್ತಿ ನೀಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಾಸದ ಜೊತೆಗೆ ರಾಷ್ಟಾçಭಿಮಾನ, ವೈಜ್ಞಾನಿಕ ಚಿಂತನೆ, ಸುಸ್ಥಿರ ಆರ್ಥಿಕ ಅಭಿವೃದ್ಧಿ ಹಾಗೂ ಸಮಾಜದಲ್ಲಿ ಜವಾಬ್ದಾರಿಯ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ನುಡಿದರು. ಹಾಗೆಯೇ ಯೋಗದ ವಿವಿಧ ಭಂಗಿಗಳನ್ನು ಪ್ರಾಯೋಗಿಕವಾಗಿ ಮಾಡಿತೋರಿಸಿದರು.
ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಸಿ. ಕನಕಟ್ಟೆ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಇಂದಿನ ಯುವಪೀಳಿಗೆ ಅನೇಕ ತೊಂದರೆಗಳಿಗೆ ಈಡಾಗುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಯುವಕ-ಯುವಕಿಯರಿಗೆ ಸರಿಯಾದ ಮಾರ್ಗದರ್ಶನ ಇರದಿರುವುದು. ಯಶಸ್ವಿ ಜೀವನಕ್ಕೆ ಜೀವನ ಕೌಶಲ್ಯಗಳು ಅವಶ್ಯಕವಾಗಿವೆ. ಯೋಗದಿಂದ ತಮ್ಮ ಆಂತರಿಕ ಮನಸ್ಸನ್ನು ಸ್ಥಿರವಾಗಿಟ್ಟುಕೊಂಡು ಉತ್ತಮ ಆಲೋಚನೆಗಳಿಂದ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಉಪನ್ಯಾಸಕರಾದ ಸಂತೋಷಕುಮಾರ ಸಜ್ಜನ ನಿರೂಪಿಸಿದರು, ರಾಜಕುಮಾರ ಸಿಂಧೆ ಸ್ವಾಗತಿಸಿದರು ಪಾಂಡುರAಗ ಕುಂಬಾರ ವಂದಿಸಿದರು. ಉಪನ್ಯಾಸಕರಾದ ಶಿಲ್ಪಾ ಹಿಪ್ಪರಗಿ, ವೀಣಾ ಜಲಾದಿ, ಡಾ. ಸಿದ್ಧರಾಮ ನೆಂಗಾ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ