ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿಯಿಂದ ಬಿ ಆರ್ ಪಿ ಯಲ್ಲಿ ರೈತರ ಪ್ರತಿಭಟನೆ

ಭದ್ರಾವತಿ: ಭದ್ರಾ ಜಲಾಶಯದಿಂದ ನೀರು ಹರಿಸುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಸಮಿತಿಯ ಮುಖಂಡ ಮಂಜಪ್ಪ ಗೌಡ ಹಾಗೂ ರಾಜ್ಯ ರೈತ ಮುಖಂಡ ಕೆ ಟಿ ಗಂಗಾಧರ್ ನೇತೃತ್ವದಲ್ಲಿ ರೈತರು ಬಿ ಆರ್ ಪ್ರಾಜೆಕ್ಟ್ ನೀರಾವರಿ
ಇಲಾಖೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ವಾಡಿಕೆ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ 100ಕ್ಕೂ ಅಧಿಕ ತಾಲ್ಲೂಕುಗಳು ಬರಪೀಡಿತ ಪ್ರದೇಶದ ವ್ಯಾಪ್ತಿಗೆ ಒಳಪಟ್ಟಿವೆ. ದಾವಣಗೆರೆ ಜಿಲ್ಲೆಯಲ್ಲಿ 75,000ಕ್ಕೂ ಅಧಿಕ ಎಕರೆ ಹಾಗೂ ಶಿವಮೊಗ್ಗ- ಭದ್ರಾವತಿ, ಹೊಳೆಹೊನ್ನೂರು ಹಾಗು ತರೀಕೆರೆ ವ್ಯಾಪ್ತಿಯಲ್ಲಿ 80,000ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗಿದೆ. ವಾಡಿಕೆ ಮಳೆ ಕಡಿಮೆಯಾದ ಪರಿಣಾಮ ಬೇಸಿಗೆಯಲ್ಲಿ ನೀರಿನ ಕೊರತೆ ಸಂಭವಿಸಲಿದೆ. ಆದ್ದರಿಂದ ಭದ್ರಾ ಜಲಾಶಯದಿಂದ ನೀರು ಹರಿಸುವಿಕೆ ಕೂಡಲೇ ಸ್ಥಗಿತಗೊಳಿಸಬೇಕು.
ಭದ್ರಾ ಜಲಾಶಯದ ಎಡ ಮತ್ತು ಬಲದಂಡೆಯ ನಾಲೆಯಲ್ಲಿ ಆ.10 ರಿಂದ ನ.20 ರವರೆಗೆ 100 ದಿನಗಳ ಕಾಲ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ. ಇದು ಅವೈಜ್ಞಾನಿಕವಾದುದು. ಈ ನಿಲುವಿನಿಂದ ಅಡಿಕೆ ಬೆಳೆಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಭದ್ರಾ ಜಲಾಶಯದಲ್ಲಿ ಪ್ರಸ್ತುತ 40 ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು, ಅದರಲ್ಲಿ 13 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಇದರಲ್ಲಿ 7 ಟಿಎಂಸಿ ಕುಡಿಯುವ ನೀರಿಗೆ ಮೀಸಲಾಗಿರುತ್ತದೆ. ಇದೇ ರೀತಿ 100 ದಿನಗಳ ಕಾಲ ನೀರು ಹರಿಸಿದರೆ ಉಳಿದ 20 ಟಿಎಂಸಿ ಖಾಲಿಯಾಗಿ ಜಲಾಶಯದ ಒಡಲು ಸಂಪೂರ್ಣ ಬರಿದಾಗುತ್ತದೆ ಎಂದು ಹೋರಾಟ ನಿರತ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ಸಂಚಾಲಕ ಮಂಜಪ್ಪಗೌಡ ಅಧ್ಯಕ್ಷತೆಯಲ್ಲಿ ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವವಹಿಸಿದ್ದು, ರೈತ ಮುಖಂಡ ಡಿ.ವಿ.ವೀರೇಶ್ ಸೇರಿದಂತೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ